ಯಕ್ಷಗಾನ ಕಲಾವಿದ, ಪ್ರವಚನಕಾರ ಸಾಂತೂರು ಸದಾಶಿವ ರಾವ್ ನಿಧನ


ಉಡುಪಿ:
ಆರು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಅರ್ಥಧಾರಿಯಾಗಿ, ವೇಷಧಾರಿಯಾಗಿ ಸೇವೆ ಸಲ್ಲಿಸಿದ್ದ ವಿದ್ವಾಂಸ, ಪ್ರವಚನಕಾರ ಸಾಂತೂರು ಸದಾಶಿವ ರಾವ್ (86) ಅವರು ಗುರುವಾರ (09 ಡಿಸೆಂಬರ್ 2021) ನಿಧನರಾದರು.

ಬಹುಶ್ರುತ ವಿದ್ವಾಂಸರಾಗಿ, ಹವ್ಯಾಸಿ ವೇಷಧಾರಿ, ಅರ್ಥಧಾರಿ, ಧಾರ್ಮಿಕ ಪ್ರವಚನಕಾರಗಿದ್ದ ಸದಾಶಿವ ರಾವ್, ನಿವೃತ್ತ ಉಪನ್ಯಾಸಕರಾಗಿದ್ದರು. ಅವರು ಪತ್ನಿ ಹಾಗೂ ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಅವರು ಹಲವಾರು ಶಿಷ್ಯರನ್ನು ರೂಪಿಸಿದ್ದಾರೆ. ಕಳೆದ ವರ್ಷ ಉಡುಪಿಯ ಯಕ್ಷಗಾನ ಕಲಾರಂಗವು ಇವರಿಗೆ ಮಟ್ಟಿ ಮುರಲೀಧರರಾವ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು