ನ.17ರಂದು ಯಕ್ಷಗಾನ ಕಲಾರಂಗ 2024 ಪ್ರಶಸ್ತಿ ಪ್ರದಾನ: ಪುರಸ್ಕೃತರ ಪಟ್ಟಿ ಇಲ್ಲಿದೆ



ಯಕ್ಷಗಾನ.ಇನ್ ಅಪ್‌ಡೇಟ್ಸ್ ಪಡೆಯಲು ಫೇಸ್‌ಬುಕ್ | ಟ್ವಿಟರ್ | ಯೂಟ್ಯೂಬ್ ಇನ್‌ಸ್ಟಾಗ್ರಾಂ ಫಾಲೋ ಮಾಡಿ

ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗವು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ಕಲಾವಿದರಿಗೆ ಪ್ರತಿ ವರ್ಷ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ತೆಂಕು ಹಾಗೂ ಬಡಗುತಿಟ್ಟಿನ 22 ಯಕ್ಷಗಾನ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

ಅದೇ ರೀತಿ, ಪ್ರತಿಷ್ಠಿತ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಕುಂದಾಪುರ ತೆಕ್ಕಟ್ಟೆಯ ಯಶಸ್ವಿ ಕಲಾವೃಂದ (ರಿ) ಆಯ್ಕೆಯಾಗಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿದೆ ಎಂದು ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪಡೆದ ಕಲಾವಿದರ ಪಟ್ಟಿ ಇಲ್ಲಿದೆ:
  1. ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ವೇಷಧಾರಿ ಎಚ್. ನಾರಾಯಣ ಶೆಟ್ಟಿ
  2. ಪ್ರೊ. ಬಿ. ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ಮದ್ದಲೆ ವಾದಕ ದೇವದಾಸ್ ರಾವ್
  3. ನಿಟ್ಟೂರು ಸುಂದರ ಶೆಟ್ಟಿ–ಮಹೇಶ ಡಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಕಟೀಲು ಮೇಳದ ಹಿರಿಯ ವೇಷಧಾರಿ ಸುರೇಶ್ ಕುಪ್ಪೆಪದವು
  4. ಬಿ. ಜಗಜ್ಜೀವನದಾಸ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಹಿರಿಯ ವೇಷಧಾರಿ ಪುರಂದರ ಹೆಗಡೆ ನಾಗರಕೊಡಿಗೆ
  5. ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಹಿರಿಯ ವೇಷಧಾರಿ ಗುಂಡಿಬೈಲು ನಾರಾಯಣ ಭಟ್
  6. ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿಗೆ ದಕ್ಷಿಣ ಕನ್ನಡದ ಹಿರಿಯ ವೇಷಧಾರಿ ಅಶೋಕ ಶೆಟ್ಟಿ ಸರಪಾಡಿ
  7. ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ಭಾಗವತರಾದ ಕಿಗ್ಗ ಹಿರಿಯಣ್ಣ ಆಚಾರ್
  8. ಮಾರ್ವಿ ರಾಮಕೃಷ್ಣ ಹೆಬ್ಬಾರ, ಮಾರ್ವಿ ವಾದಿರಾಜ ಹೆಬ್ಬಾರ ಸ್ಮರಣಾರ್ಥ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಹಿರಿಯ ವೇಷಧಾರಿ ಥಂಡಿಮನೆ ಶ್ರೀಪಾದ್ ಭಟ್
  9. ಶಿರಿಯಾರ ಮಂಜು ನಾಯ್ಕ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ವೇಷಧಾರಿ ಮೊಗೆಬೆಟ್ಟು ಹೆರಿಯ ನಾಯ್ಕ
  10. ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿಗೆ ದ.ಕ. ಜಿಲ್ಲೆಯ ಹಿರಿಯ ಸ್ತ್ರೀಪಾತ್ರಧಾರಿ ತೊಡಿಕಾನ ಕೆ. ಬಾಬು ಗೌಡ
  11. ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ವೇಷಧಾರಿ ಹಾಲಾಡಿ ಕೃಷ್ಣ ಮರಕಾಲ
  12. ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ವೇಷಧಾರಿ ಕೃಷ್ಣ ಪೂಜಾರಿ ಚಕ್ರಮೈದಾನ
  13. ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ವೇಷಧಾರಿ ಹಾವಂಜೆ ಮಂಜುನಾಥ ರಾವ್
  14. ಐರೋಡಿ ರಾಮಗಾಣಿಗ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ಭಾಗವತ ಹೆರಂಜಾಲು ಗೋಪಾಲ ಗಾಣಿಗ
  15. ಮಾನ್ಯ ತಿಮ್ಮಯ್ಯ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ವೇಷಧಾರಿ ಚೇರ್ಕಾಡಿ ರಾಧಾಕೃಷ್ಣ ನಾಯ್ಕ್
  16. ಎಚ್. ಪರಮೇಶ್ವರ ಐತಾಳ್ ಸ್ಮರಣಾರ್ಥ ಪ್ರಶಸ್ತಿಗೆ ಕಾಸರಗೋಡು ಜಿಲ್ಲೆಯ ಹಿರಿಯ ಮದ್ದಲೆವಾದಕ ಶೇಣಿ ಸುಬ್ರಹ್ಮಣ್ಯ ಭಟ್
  17. ಕಡಂದೇಲು ಪುರುಷೋತ್ತಮ ಭಟ್ ಸ್ಮರಣಾರ್ಥ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಭಾಗವತ ಸರಪಾಡಿ ಶಂಕರ ನಾರಾಯಣ ಕಾರಂತ
  18. ಕಡತೋಕ ಕೃಷ್ಣ ಭಾಗವತ ಸ್ಮರಣಾರ್ಥ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಹಿರಿಯ ಭಾಗವತ ವೆಂಕಟ ರಾವ್ ಹೊಡಬಟ್ಟೆ, ಸಾಗರ
  19. ಬಿ. ಪಿ. ಕರ್ಕೇರಾ ಸ್ಮರಣಾರ್ಥ ಪ್ರಶಸ್ತಿಗೆ ದ.ಕ. ಜಿಲ್ಲೆಯ ಹಿರಿಯ ಭಾಗವತ ಕಟೀಲು ರಮಾನಂದ ರಾವ್
  20. ಕೆ. ಮನೋಹರ ಸ್ಮರಣಾರ್ಥ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಹಿರಿಯ ಚೌಕಿ ಸಹಾಯಕ ಹೆಗ್ಗುಂಜೆ ನರಸಿಂಹ ಮಡಿವಾಳ
  21. ಕೋಳ್ಯೂರು ರಾಮಚಂದ್ರ ರಾವ್ ಗೌರವಾರ್ಥ ಪ್ರಶಸ್ತಿಗೆ ದ.ಕ. ಜಿಲ್ಲೆಯ ಹಿರಿಯ ವೇಷಧಾರಿ ಅಂಬಾಪ್ರಸಾದ ಪಾತಾಳ
  22. ಪ್ರಭಾವತಿ ವಿ. ಶೆಣೈ - ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಹಿರಿಯ ಮದ್ದಲೆವಾದಕ ಗಜಾನನ ಸತ್ಯನಾರಾಯಣ ಭಂಡಾರಿ
ಈ ಸ್ಮರಣಾರ್ಥ ಮತ್ತು ಗೌರವಾರ್ಥ ಪ್ರಶಸ್ತಿಗಳು ತಲಾ ₹ 20,000 ನಗದು ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭವು ನ. 17ರಂದು ಮಧ್ಯಾಹ್ನ 3ರಿಂದ 7ರ ವರೆಗೆ ಉಡುಪಿ ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐ.ವೈ.ಸಿ ಸಭಾಂಗಣದಲ್ಲಿ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು